ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ, ಅಶ್ವವಾಹನೋತ್ಸವ, ತಿರುಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಂಗಳವಾರ ಮದ್ಯಾಹ್ನ 12 ಗಂಟೆಗೆ ಬ್ರಹ್ಮ ರಥೋತ್ಸವಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. ಬ್ರಹ್ಮರಥೋತ್ಸವಕ್ಕೆ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಂದಿದ್ದ ಭಕ್ತರು ಶ್ರದ್ದೆ ಭಕ್ತಿಯಿಂದ ಸ್ವಾಮಿಯ ರಥಕ್ಕೆ ಹೂವು ಹಣ್ಣು ದವನ ಅರ್ಪಿಸಿ ಭಕ್ತಿ ಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಸುಪ್ರಭಾತ ಸೇವೆ, ಹೂಮಾಲೆ ಸೇವೆ, ನವಗ್ರಹ ಪೂಜೆ, ರಥದ ಮುಂಭಾಗದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.

ಲಕ್ಷೀ ನರಸಿಂಹಸ್ವಾಮಿಗೆ ವಿಶೇಷವಾಗಿ ವಿವಿದ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕೆಲವು ಸಾಂಸ್ಕೃತಿಕ ಕಲಾ ತಂಡಗಳಿಂದ ಭಕ್ತಿಗೀತೆ ಗಾಯನ, ಭಜನೆ, ಆಗಮಿಕರ ಮಂತ್ರ ಪಠಣೆಗಳು, ಭಕ್ತಜನ ಸಾಗರದ ಜಯ ಘೋಷದೊಂದಿಗೆ ರಥೋತ್ಸವ ನಡೆಯಿತ್ತು. ಜಾತ್ರೆಯ ಪ್ರಯುಕ್ತ ದೇವಾಲಯದ ಟ್ರಸ್ಟ್ ವತಿಯಿಂದ ರಥೊತ್ಸವಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಮಜ್ಜಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.

ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಕೆಳಗೆ ಬ್ರಹ್ಮ ರಥೋತ್ಸವದ ಅಂಗವಾಗಿ ಅಂಗಡಿ ಮುಗ್ಗಟ್ಟುಗಳ ಜಾತ್ರೆಯ ಕಲರವ ಜೋರಾಗಿತ್ತು. ಬರುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಅನೇಕ ಗಣ್ಯರು, ದೇವಸ್ಥಾನದ ಟ್ರಸ್ಟ್ ನ ಸದಸ್ಯರು ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

15 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

16 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

22 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

22 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago