ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ, ಅಶ್ವವಾಹನೋತ್ಸವ, ತಿರುಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಂಗಳವಾರ ಮದ್ಯಾಹ್ನ 12 ಗಂಟೆಗೆ ಬ್ರಹ್ಮ ರಥೋತ್ಸವಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. ಬ್ರಹ್ಮರಥೋತ್ಸವಕ್ಕೆ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಂದಿದ್ದ ಭಕ್ತರು ಶ್ರದ್ದೆ ಭಕ್ತಿಯಿಂದ ಸ್ವಾಮಿಯ ರಥಕ್ಕೆ ಹೂವು ಹಣ್ಣು ದವನ ಅರ್ಪಿಸಿ ಭಕ್ತಿ ಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಸುಪ್ರಭಾತ ಸೇವೆ, ಹೂಮಾಲೆ ಸೇವೆ, ನವಗ್ರಹ ಪೂಜೆ, ರಥದ ಮುಂಭಾಗದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.

ಲಕ್ಷೀ ನರಸಿಂಹಸ್ವಾಮಿಗೆ ವಿಶೇಷವಾಗಿ ವಿವಿದ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕೆಲವು ಸಾಂಸ್ಕೃತಿಕ ಕಲಾ ತಂಡಗಳಿಂದ ಭಕ್ತಿಗೀತೆ ಗಾಯನ, ಭಜನೆ, ಆಗಮಿಕರ ಮಂತ್ರ ಪಠಣೆಗಳು, ಭಕ್ತಜನ ಸಾಗರದ ಜಯ ಘೋಷದೊಂದಿಗೆ ರಥೋತ್ಸವ ನಡೆಯಿತ್ತು. ಜಾತ್ರೆಯ ಪ್ರಯುಕ್ತ ದೇವಾಲಯದ ಟ್ರಸ್ಟ್ ವತಿಯಿಂದ ರಥೊತ್ಸವಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಮಜ್ಜಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.

ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಕೆಳಗೆ ಬ್ರಹ್ಮ ರಥೋತ್ಸವದ ಅಂಗವಾಗಿ ಅಂಗಡಿ ಮುಗ್ಗಟ್ಟುಗಳ ಜಾತ್ರೆಯ ಕಲರವ ಜೋರಾಗಿತ್ತು. ಬರುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಅನೇಕ ಗಣ್ಯರು, ದೇವಸ್ಥಾನದ ಟ್ರಸ್ಟ್ ನ ಸದಸ್ಯರು ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago