ನಗರದ ಅರ್ಕಾವತಿ ಬಡಾವಣೆಯ ಇತಿಹಾಸ ಪ್ರಸಿದ್ದ ಶ್ರೀ ಲಕ್ಷೀ ನರಸಿಂಹಸ್ವಾಮಿಯ ವಿಜೃಂಭಣೆ ಬ್ರಹ್ಮ ರಥೋತ್ಸವ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಕಾರ್ಯಕ್ರಮಗಳು ಭಾನುವಾರದಿಂದ ಆರಂಭವಾಗಿ ಹನುಮಂತೋತ್ಸವ, ಗರುಡೋತ್ಸವ, ಸೋಮವಾರ ಗಜವಾಹನೋತ್ಸವ, ಅಶ್ವವಾಹನೋತ್ಸವ, ತಿರುಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಮಂಗಳವಾರ ಮದ್ಯಾಹ್ನ 12 ಗಂಟೆಗೆ ಬ್ರಹ್ಮ ರಥೋತ್ಸವಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. ಬ್ರಹ್ಮರಥೋತ್ಸವಕ್ಕೆ ನಗರ ಹಾಗೂ ಗ್ರಾಮಾಂತರ ಭಾಗದಿಂದ ಬಂದಿದ್ದ ಭಕ್ತರು ಶ್ರದ್ದೆ ಭಕ್ತಿಯಿಂದ ಸ್ವಾಮಿಯ ರಥಕ್ಕೆ ಹೂವು ಹಣ್ಣು ದವನ ಅರ್ಪಿಸಿ ಭಕ್ತಿ ಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಸುಪ್ರಭಾತ ಸೇವೆ, ಹೂಮಾಲೆ ಸೇವೆ, ನವಗ್ರಹ ಪೂಜೆ, ರಥದ ಮುಂಭಾಗದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.

ಲಕ್ಷೀ ನರಸಿಂಹಸ್ವಾಮಿಗೆ ವಿಶೇಷವಾಗಿ ವಿವಿದ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕೆಲವು ಸಾಂಸ್ಕೃತಿಕ ಕಲಾ ತಂಡಗಳಿಂದ ಭಕ್ತಿಗೀತೆ ಗಾಯನ, ಭಜನೆ, ಆಗಮಿಕರ ಮಂತ್ರ ಪಠಣೆಗಳು, ಭಕ್ತಜನ ಸಾಗರದ ಜಯ ಘೋಷದೊಂದಿಗೆ ರಥೋತ್ಸವ ನಡೆಯಿತ್ತು. ಜಾತ್ರೆಯ ಪ್ರಯುಕ್ತ ದೇವಾಲಯದ ಟ್ರಸ್ಟ್ ವತಿಯಿಂದ ರಥೊತ್ಸವಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಮಜ್ಜಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.

ಡಿ.ಕ್ರಾಸ್ ರೈಲ್ವೆ ಮೇಲ್ಸೇತುವೆ ಕೆಳಗೆ ಬ್ರಹ್ಮ ರಥೋತ್ಸವದ ಅಂಗವಾಗಿ ಅಂಗಡಿ ಮುಗ್ಗಟ್ಟುಗಳ ಜಾತ್ರೆಯ ಕಲರವ ಜೋರಾಗಿತ್ತು. ಬರುವ ಭಕ್ತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಅನೇಕ ಗಣ್ಯರು, ದೇವಸ್ಥಾನದ ಟ್ರಸ್ಟ್ ನ ಸದಸ್ಯರು ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಇದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

8 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

12 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

14 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

16 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

19 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago