ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago