ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago