ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

6 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

10 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago