ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

3 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

5 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

5 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

5 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

8 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

11 hours ago