ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ.

ಪ್ರತಿನಿತ್ಯ ನಗರದಲ್ಲಿನ ಡಾ.ಬಿಆರ್ ಅಂಬೇಡ್ಕರ್ ವೃತ್ತ, ಡಿ.ಕ್ರಾಸ್ ವೃತ್ತ, ರೈಲ್ವೆ ನಿಲ್ದಾಣ ವೃತ್ತ, ತಾಲೂಕು ಕಚೇರಿ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಟ್ರಾಫಿಕ್ ಪೊಲೀಸ್ ಹಾಗೂ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅವಶ್ಯಕ ಮತ್ತು ಜರೂರಾಗಿತ್ತು.

ಇದೀಗ ಇದೇ ಮೊದಲ ಬಾರಿಗೆ ಪ್ರಪ್ರಥಮವಾಗಿ ದೊಡ್ಡಬಳ್ಳಾಪುರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಪ್ರವಾಸಿ ಮಂದಿರ ಸರ್ಕಲ್)ದಲ್ಲಿ ಆತ್ಯಾಧುನಿಕ ತಂತ್ರಜ್ಞಾನದ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ.

ಜಿಬ್ರಾ ಲೈನ್, ಸಂಚಾರಿ ನಿಯಮಗಳ ಪಾಲನೆ ಇಲ್ಲ:

ಇದೇ ಮೊದಲ ಬಾರಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುತ್ತಿರುವುದರಿಂದ ಸಾರ್ವಜನರಿಗೆ ಟ್ರಾಫಿಕ್ ಲೈನ್‌ಗಳ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಸಿಗ್ನಲ್ ಅಳವಡಿಸಿರುವ ವೃತ್ತದಲ್ಲಿ ಜಿಬ್ರಾ ಲೈನ್‌ಗಳು, ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸುವ ಅವಶ್ಯಕತೆ ಇದೆ. ಜಿಬ್ರಾ ಲೈನ್‌ಗಳಿಲ್ಲದೆ ಸಾರ್ವಜನಿಕರು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸುವಂತ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಅವಶ್ಯಕ:

ನಗರದಲ್ಲಿ ತಾಲೂಕು ಕಚೇರಿ, ಮುಖ್ಯರಸ್ತೆ, ರುಮಾಲೆ ಛತ್ರದ ರಸ್ತೆ, ಬಸ್ ನಿಲ್ದಾಣ, ಚೌಕ, ಡಿ.ಕ್ರಾಸ್, ರೈಲ್ವೆ ನಿಲ್ದಾಣ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಹೀಗೆ ನಗರದ ಇಕ್ಕೆಲಗಳಲ್ಲಿ ದಿನವಿಡಿ ವಾಹನಗಳ ಸವಾರರು ತಾ ಮುಂದೆ. ನಾ ಮುಂದೆ ಎಂಬಂತೆ ಪೈಪೋಟಿಗೆ ಬಿದ್ದು ವಾಹನಗಳನ್ನು ಚಲಾಯಿಸುತ್ತಾರೆ. ಯಾವುದೇ ಸಂಚಾರಿ ನಿಯಮಗಳನ್ನೂ ಯಾರೊಬ್ಬರೂ ಪಾಲಿಸುತ್ತಿಲ್ಲ.

ಅಪಘಾತವಾದ ಸಂದರ್ಭದಲ್ಲಿ ಮಾತ್ರ ಕಾನೂನುಗಳ ಬಗ್ಗೆ ಜನ ಪುಂಕಾನುಪುಂಕ ಮಾತನಾಡುತ್ತಾರೆ. ಜನಸಂಖ್ಯೆಯೂ ಹೆಚ್ಚಿರುವುದರಿಂದ ವಾಹನಗಳ ಸಂಖ್ಯೆಯೂ ಪ್ರತಿನಿತ್ಯ ಹೆಚ್ಚುತ್ತಲೆ ಇದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮೂರು ತಾಲೂಕುಗಳಲ್ಲಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದೆ. ದೊಡ್ಡಬಳ್ಳಾಪುರಕ್ಕೂ ಟ್ರಾಫಿಕ್ ಪೊಲೀಸ್ ಠಾಣೆ ಅಗತ್ಯವಾಗಿದೆ.

ಮತ್ತಷ್ಟು ಪಾಯಿಂಟ್‌ಗಳಲ್ಲಿ ಬೇಕಿದೆ ಸಿಗ್ನಲ್:

ಪ್ರತಿನಿತ್ಯ ಬೆಳ್ಳಂಬೆಳ್ಳಗ್ಗೆಯಿಂದ ರಾತ್ರಿ 10 ಗಂಟೆವರೆಗೂ ವಾಹನ ದಟ್ಟಣೆಯಿರುವ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದ್ದರೆ.ಬಸ್ ನಿಲ್ದಾಣ, ತಾಲೂಕು ಕಚೇರಿ ವೃತ್ತ, ಚೌಕ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ, ಹೀಗೆ ಹಲವು ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ನಿಯೋಜನೆ ಅತ್ಯಂತ ಶೀಘ್ರವಾಗಿ ಆಗಬೇಕಿದೆ.

 

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago