ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

3 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

4 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

4 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

11 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

12 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

15 hours ago