ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

11 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

18 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago