ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

8 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

8 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

9 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

9 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

11 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

15 hours ago