ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago