ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago