ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

59 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago