ನಗರದ ತಾಯಿ-ಮಗು ಆಸ್ಪತ್ರಗೆ ಬೇಕು ಒಬ್ಬ ಕಾವಲುಗಾರ: ರಾತ್ರಿಪಾಳಿ ಕೆಲಸ‌ ಮಾಡೋ ಮಹಿಳಾ ವೈದ್ಯರು, ನರ್ಸ್ ಗಳಿಗೆ ಬೇಕು ಭದ್ರತೆ- ಸಮಾಜ ಸೇವಕಿ ನಾಗರತ್ನಮ್ಮ

ನಗರದ ತಾಯಿ-ಮಗು ಆಸ್ಪತ್ರೆಯಲ್ಲಿ ದಿನನಿತ್ಯ ಸಾವಿರಾರು ಮಂದಿ ಬಂದು ಚಿಕಿತ್ಸೆ ಪಡೆಯುತ್ತಿರುತ್ತಾರೆ. ಆಸ್ಪತ್ರೆಯಲ್ಲಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್ ಗಳು ಸೇರಿದಂತೆ ಇರತೆ ಸಿಬ್ಬಂದಿ ಇರುತ್ತಾರೆ. ಆದರೆ ಇಲ್ಲಿ ಒಬ್ಬ ಕಾವಲುಗಾರ ಇಲ್ಲ. ಅಭದ್ರತೆಯಲ್ಲಿ ಪಾಳಿಯ ಕೆಲಸ ಮಾಡೋ ಮಹಿಳಾ ವೈದ್ಯರು, ನರ್ಸ್ ಸಿಬ್ಬಂದಿ. ಇವರು ಸೂಕ್ತ ಭದ್ರತೆಯಲ್ಲಿ ನಿರ್ಭೀತಿಯಿಂದ ಕೆಲಸ ಮಾಡಲು ಕಾವಲುಗಾರ ಅಥವಾ ಗನ್ ಮೆನ್ ಆಸ್ಪತ್ರೆಗೆ ಅತ್ಯವಶ್ಯಕ ಎಂದು ಸಮಾಜ ಸೇವಕಿ ನಾಗರತ್ನಮ್ಮ ಆಗ್ರಹಿಸಿದರು.

ಇನ್ನೂ ಈ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಇಲ್ಲ, ಬ್ಲಡ್ ಗಾಗಿ ಚಿಕ್ಕಬಳ್ಳಾಪುರ, ಯಲಹಂಕ ಹೀಗೆ ದೂರದ ಬ್ಲಡ್ ಬ್ಯಾಂಕ್ ಇರೋ ಕಡೆ ಹೋಗಿ ತೆಗೆದುಕೊಂಡು ಬರುವಷ್ಟರಲ್ಲಿ ಇಲ್ಲಿ ರೋಗಿ ಪ್ರಾಣ ಹೋಗಿರುತ್ತೆ. ಆದ್ದರಿಂದ ಆಸ್ಪತ್ರೆಗೆ ಬ್ಲಡ್ ಬ್ಯಾಂಕ್ ನ ಅಗತ್ಯತೆ ಇದೆ.

ಚಿಕಿತ್ಸೆ ಫಲಿಸದೇ ಆನೇಕ ರೋಗಿಗಳು ಸಾವನ್ನಪ್ಪಿದ ತಕ್ಷಣ ಶವಗಳನ್ನು ಶವಗಾರದಲ್ಲಿ ಇಡಲು ಇಲ್ಲಿ ಶವಗಾರ ವ್ಯವಸ್ಥೆ ಇಲ್ಲ. ಇನ್ನೂ ಮೂಲಭೂತ ಸೌಕರ್ಯಗಳ ಅವಶ್ಯಕತೆ ಈ ಆಸ್ಪತ್ರೆಗೆ ಇದೆ. ದಯಮಾಡಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಆಸ್ಪತ್ರೆಗೆ ಬೇಕಾಗುವ ಅಗತ್ಯತೆಗಳನ್ನು ಪೂರೈಸಬೇಕು ಎಂದು ಮನವಿ ಮಾಡಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago