ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ- ಪರಿಶೀಲನೆ

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪನವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಶೀಲ್ದಾರ್‌ ಸೇರಿದಂತೆ ಎಲ್ಲಾ ಕಚೇರಿಯ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ತಳ ಮಟ್ಟದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂದು ಎಚ್ಚರಿಸಿದರು.

ಸರ್ವೇ ಆಫೀಸ್ ನಲ್ಲಿ 26 ಸಿಬ್ಬಂದಿಯಲ್ಲಿ ಇಬ್ಬರು ಮಾತ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಿಕ್ಕುಳಿದ ಸಿಬ್ಬಂದಿ ಎಲ್ಲಿ ಎಂದು ಗರಂ ಆದರು.

ನಂತರ ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆ ಕೆಲಕಾಲ ಸಂವಾದ ನಡೆಸಿದರು. ಕೆಲ‌ ಪ್ರಶ್ನೆಗಳನ್ನು ಹಾಕಿ ವಿದ್ಯಾರ್ಥಿಗಳ ಬಳಿ ಉತ್ತರ ಪಡೆದರು.

ಬೆಳಗ್ಗೆ ಮಕ್ಕಳು ತಣ್ಣೀರಿನ ಸ್ನಾನ ಮಾಡಬಾರದು, ಬಿಸಿ‌ ನೀರಿನ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದರು.

ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ‌ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ‌ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದರು.

ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ರೋಗಿಗಳಿಗೆ ನೀಡುತ್ತಿರುವ ವೈದ್ಯಕೀಯ ಸೇವೆಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಉಪಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಡಿವೈಎಸ್ ಪಿ ವೆಂಕಟೇಶ್, ಡಿವೈಎಸ್ ಪಿ ಗಿರೀಶ್ ರೋಡ್ಕರ್, ಇನ್ಸ್ಪೆಕ್ಟರ್ ರಮೇಶ್, ದೊಡ್ಡಬಳ್ಳಾಪುರ ನಗರ ಠಾಣೆ ಇನ್ ಸ್ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ‌‌ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago