ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ- ಪರಿಶೀಲನೆ

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪನವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಶೀಲ್ದಾರ್‌ ಸೇರಿದಂತೆ ಎಲ್ಲಾ ಕಚೇರಿಯ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ತಳ ಮಟ್ಟದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂದು ಎಚ್ಚರಿಸಿದರು.

ಸರ್ವೇ ಆಫೀಸ್ ನಲ್ಲಿ 26 ಸಿಬ್ಬಂದಿಯಲ್ಲಿ ಇಬ್ಬರು ಮಾತ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಿಕ್ಕುಳಿದ ಸಿಬ್ಬಂದಿ ಎಲ್ಲಿ ಎಂದು ಗರಂ ಆದರು.

ನಂತರ ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆ ಕೆಲಕಾಲ ಸಂವಾದ ನಡೆಸಿದರು. ಕೆಲ‌ ಪ್ರಶ್ನೆಗಳನ್ನು ಹಾಕಿ ವಿದ್ಯಾರ್ಥಿಗಳ ಬಳಿ ಉತ್ತರ ಪಡೆದರು.

ಬೆಳಗ್ಗೆ ಮಕ್ಕಳು ತಣ್ಣೀರಿನ ಸ್ನಾನ ಮಾಡಬಾರದು, ಬಿಸಿ‌ ನೀರಿನ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದರು.

ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ‌ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ‌ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದರು.

ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ರೋಗಿಗಳಿಗೆ ನೀಡುತ್ತಿರುವ ವೈದ್ಯಕೀಯ ಸೇವೆಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಉಪಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಡಿವೈಎಸ್ ಪಿ ವೆಂಕಟೇಶ್, ಡಿವೈಎಸ್ ಪಿ ಗಿರೀಶ್ ರೋಡ್ಕರ್, ಇನ್ಸ್ಪೆಕ್ಟರ್ ರಮೇಶ್, ದೊಡ್ಡಬಳ್ಳಾಪುರ ನಗರ ಠಾಣೆ ಇನ್ ಸ್ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ‌‌ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago