ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ- ಪರಿಶೀಲನೆ

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪನವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಶೀಲ್ದಾರ್‌ ಸೇರಿದಂತೆ ಎಲ್ಲಾ ಕಚೇರಿಯ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ತಳ ಮಟ್ಟದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂದು ಎಚ್ಚರಿಸಿದರು.

ಸರ್ವೇ ಆಫೀಸ್ ನಲ್ಲಿ 26 ಸಿಬ್ಬಂದಿಯಲ್ಲಿ ಇಬ್ಬರು ಮಾತ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಿಕ್ಕುಳಿದ ಸಿಬ್ಬಂದಿ ಎಲ್ಲಿ ಎಂದು ಗರಂ ಆದರು.

ನಂತರ ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು ಹಾಸ್ಟೆಲ್ ವಿದ್ಯಾರ್ಥಿಗಳ ಜೊತೆ ಕೆಲಕಾಲ ಸಂವಾದ ನಡೆಸಿದರು. ಕೆಲ‌ ಪ್ರಶ್ನೆಗಳನ್ನು ಹಾಕಿ ವಿದ್ಯಾರ್ಥಿಗಳ ಬಳಿ ಉತ್ತರ ಪಡೆದರು.

ಬೆಳಗ್ಗೆ ಮಕ್ಕಳು ತಣ್ಣೀರಿನ ಸ್ನಾನ ಮಾಡಬಾರದು, ಬಿಸಿ‌ ನೀರಿನ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂದರು.

ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ‌ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ‌ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್ ನಲ್ಲಿ ನಮೂದಿಸಬೇಕು. ತದನಂರ ಸಂಜೆ ಕೆಲಸ ಮುಗಿದ ಬಳಿಕ ಎಷ್ಟು ಹಣ ತಮ್ಮಲ್ಲಿದೆ ಎಂದು ನಮೂದಿಸಿ ಹೋಗಬೇಕು. ಒಂದು ವೇಳೆ ಹೆಚ್ಚು ಹಣ ಇದ್ದರೆ ಕಾರಣ ತಿಳಿಸಬೇಕು ಎಂದರು.

ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ‌ ನೀಡಿ ರೋಗಿಗಳಿಗೆ ನೀಡುತ್ತಿರುವ ವೈದ್ಯಕೀಯ ಸೇವೆಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಉಪಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಡಿವೈಎಸ್ ಪಿ ವೆಂಕಟೇಶ್, ಡಿವೈಎಸ್ ಪಿ ಗಿರೀಶ್ ರೋಡ್ಕರ್, ಇನ್ಸ್ಪೆಕ್ಟರ್ ರಮೇಶ್, ದೊಡ್ಡಬಳ್ಳಾಪುರ ನಗರ ಠಾಣೆ ಇನ್ ಸ್ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ‌‌ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

13 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

23 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

23 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago