ಗೋಕಾಕ್ ಹೋರಾಟದ ಸಮಯದಲ್ಲಿ ನಮ್ಮ ಶಿಕ್ಷಣ ಸಂಸ್ಥೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ದೊರೆತಿದೆ. 1981ರಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಮತ್ತು ಶಿಕ್ಷಣದ ಗುಣಮಟ್ಟದ ಹೆಚ್ಚಿಸಿಕೊಳ್ಳುತ್ತಿರುವುದರಿಂದ ಪೋಷಕರು ಕೂಡ ನಮ್ಮ ಶಿಕ್ಷಣ ಸಂಸ್ಥೆ ಮೇಲೆ ವಿಶ್ವಾಸ ಇರಿಸಿದ್ದಾರೆ ಎಂದು ಶಾಲಾ ಕಾರ್ಯದರ್ಶಿ ಪುರುಷೋತ್ತಮ ಅವರು ಹೇಳಿದರು
ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ಶುಕ್ರವಾರ 2022-23 ನೇ ಸಾಲಿನ ವಾರ್ಷಿಕೋತ್ಸವ ಮತ್ತು ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವಿದ್ಯಾರ್ಜನೆ ನೀಡುವ ದೇವಾಲಯಗಳು ಆಗಬೇಕೆ ಹೊರತು ಕೇವಲ ಪೋಷಕರಿಂದ ಶುಲ್ಕ ವಸೂಲಿ ಕೇಂದ್ರಗಳಾಗಬಾರದು. ಶಿಕ್ಷಣ ಅತ್ಯುತ್ತಮ ಸೇವೆಯಾಗಿದೆ. ಅದು ವ್ಯಾಪಾರದ ಸರಕಾಗಬಾರದು ಎಂದು ನಿವೃತ್ತ ಎಸಿಪಿ ಸುಬ್ಬಣ್ಣ ತಿಳಿಸಿದರು.
ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಮಂದಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಹುದ್ದೆಯಲ್ಲಿದ್ದಾರೆ. ಸುಮಾರು 40ಕ್ಕೂ ಹೆಚ್ಚು ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮುಖಾಂತರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುರುವುದು ಹೆಮ್ಮೆಯ ವಿಷಯ. ಇದಕ್ಕೆ ಸಾಕ್ಷಿ ಪ್ರತಿವರ್ಷ ಶಾಲೆಯ ಎಸ್ಎಸ್ಎಲ್ ಫಲಿತಾಂಶವೇ ಆಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…