ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ವೈಭವ ವಾರ್ಷಿಕೋತ್ಸವ

ಗೋಕಾಕ್ ಹೋರಾಟದ ಸಮಯದಲ್ಲಿ ನಮ್ಮ ಶಿಕ್ಷಣ ಸಂಸ್ಥೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ದೊರೆತಿದೆ. 1981ರಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಮತ್ತು ಶಿಕ್ಷಣದ ಗುಣಮಟ್ಟದ ಹೆಚ್ಚಿಸಿಕೊಳ್ಳುತ್ತಿರುವುದರಿಂದ ಪೋಷಕರು ಕೂಡ ನಮ್ಮ ಶಿಕ್ಷಣ ಸಂಸ್ಥೆ ಮೇಲೆ ವಿಶ್ವಾಸ ಇರಿಸಿದ್ದಾರೆ ಎಂದು  ಶಾಲಾ ಕಾರ್ಯದರ್ಶಿ ಪುರುಷೋತ್ತಮ ಅವರು ಹೇಳಿದರು

ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ಶುಕ್ರವಾರ 2022-23 ನೇ ಸಾಲಿನ ವಾರ್ಷಿಕೋತ್ಸವ ಮತ್ತು ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವಿದ್ಯಾರ್ಜನೆ ನೀಡುವ ದೇವಾಲಯಗಳು ಆಗಬೇಕೆ ಹೊರತು ಕೇವಲ ಪೋಷಕರಿಂದ ಶುಲ್ಕ ವಸೂಲಿ ಕೇಂದ್ರಗಳಾಗಬಾರದು. ಶಿಕ್ಷಣ ಅತ್ಯುತ್ತಮ ಸೇವೆಯಾಗಿದೆ. ಅದು ವ್ಯಾಪಾರದ ಸರಕಾಗಬಾರದು ಎಂದು ನಿವೃತ್ತ ಎಸಿಪಿ ಸುಬ್ಬಣ್ಣ ತಿಳಿಸಿದರು.

ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಮಂದಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಹುದ್ದೆಯಲ್ಲಿದ್ದಾರೆ. ಸುಮಾರು 40ಕ್ಕೂ ಹೆಚ್ಚು ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮುಖಾಂತರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುರುವುದು ಹೆಮ್ಮೆಯ ವಿಷಯ. ಇದಕ್ಕೆ ಸಾಕ್ಷಿ ಪ್ರತಿವರ್ಷ ಶಾಲೆಯ ಎಸ್ಎಸ್ಎಲ್ ಫಲಿತಾಂಶವೇ ಆಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿಯಲ್ಲಿ  ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago