ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.
ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.
ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.
ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…