ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳು: ಸ್ವಚ್ಚಗೊಳಿಸದ ನಗರಸಭೆ: ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಲ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

4 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

5 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

7 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

8 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

8 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

10 hours ago