ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.
ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.
ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.
ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…