ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳು: ಸ್ವಚ್ಚಗೊಳಿಸದ ನಗರಸಭೆ: ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಲ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago