ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳು: ಸ್ವಚ್ಚಗೊಳಿಸದ ನಗರಸಭೆ: ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಲ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago