ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.
ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.
ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.
ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…