ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳು: ಸ್ವಚ್ಚಗೊಳಿಸದ ನಗರಸಭೆ: ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ ಆವರಣದಲ್ಲಿ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು, ದೊಡ್ಡಬಳ್ಳಾಪುರ ನಗರಸಭೆ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆ ಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ನಗರಸಭೆ ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಲ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago