Categories: ಕೋಲಾರ

ನಗರದ ಪಿ.ಸಿ ಬಡಾವಣೆಯ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಪಿ.ಸಿ ಬಡಾವಣೆಯ ಮಿನಿ ಹೋಟೆಲ್ ವೃತ್ತದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಆಟೋ ನಿಲ್ದಾಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಆಟೋಚಾಲಕರೇ ನಿತ್ಯ ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡಿಗರು ತಮ್ಮ ಸಾರ್ವಜನಿಕ ಸೇವೆಯ ಆಟೋದಲ್ಲಿ ಕನ್ನಡ ಸಾಹಿತ್ಯದ ಬರಹದ ಸಾಲುಗಳು, ಸಾಹಿತಿಗಳು, ಚಿತ್ರನಟರ ಭಾವಚಿತ್ರಗಳು ನೋಡುಗರನ್ನು ಸೆಳೆಯುವಂತೆ ಮಾಡಿರುತ್ತಾರೆ. ಆ ಮೂಲಕ ಸಾಮಾಜಿಕ ಪರಿವರ್ತಣೆಯಲ್ಲಿ ಹಾಗೂ ಜನರಲ್ಲಿ ಕನ್ನಡ ಪ್ರೇಮ ಹೆಚ್ಚಿಸುವ ಕೆಲಸವನ್ನು ಆಟೋ ಚಾಲಕರು ಸಮರ್ಥವಾಗಿ ಮಾಡುತ್ತಿದ್ದಾರೆ. ಅವರಲ್ಲಿನ ಕನ್ನಡತನವನ್ನು ನಾವು ಗುರುತಿಸಿ ಅಭಿನಂದಿಸಬೇಕು, ಕನ್ನಡ ಉಳಿವು ಮತ್ತು ಬೆಳೆವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ಕನ್ನಡ ರಾಜ್ಯೋತ್ಸವವು ನಿತ್ಯೋತ್ಸವವಾಗಬೇಕು. ಕನ್ನಡ ನಾಡನ್ನು ಆಳಿದ ಅನೇಕ ರಾಜರು ನಾಡಿಗಾಗಿ ಕೆಲಸ ಮಾಡಿದ್ದಾರೆ ನಾವು ಎಲ್ಲರೂ ಕನ್ನಡ ಭಾಷೆಗೆ ಧಕ್ಕೆಯಾಗದಂತೆ ಸಂಕಲ್ಪ ಮಾಡೋಣ ನಾಡಿಗೆ ಬರುವ ಅನ್ಯಭಾಷಿಕರಿಗೆ ಪ್ರೀತಿಯಿಂದ ಕನ್ನಡ ಕಲಿಸಬೇಕು ರಾಜ್ಯದಲ್ಲಿ ಲಕ್ಷಾಂತರ ಆಟೋ ಚಾಲಕರು ಸ್ವಾವಲಂಬನೆಯಿಂದ ದುಡಿಯುತ್ತಾ ಸಾರ್ವಜನಿಕರ ಸೇವಾಕ್ಷೇತ್ರದಲ್ಲಿ ಕನ್ನಡ ಪ್ರೇಮ ಮೆರೆದಿದ್ದಾರೆ ಎಂದರು.

ನಿಲ್ದಾಣದಲ್ಲಿನ ಚಾಲಕರು ತಮ್ಮ ಆಟೋಗಳನ್ನು ಹೂವು ಮತ್ತು ಕನ್ನಡದ ಬಾವುಟಗಳೊಂದಿಗೆ ಸಿಂಗರಿಸಿ ಮೆರವಣಿಗೆ ಮಾಡಿ ಕನ್ನಡ ಪ್ರೇಮ ಮೆರೆದರು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು ಸಂಘದ ಅಧ್ಯಕ್ಷ ಶ್ರೀನಿವಾಸ್, ಆಟೋ ಚಾಲಕರಾದ ಬಾಲಯ್ಯ, ಜಗದೀಶ್, ಶೇಖರ್, ನಾಗೇಶ್, ಪುನೀತ್, ಧರ್ಮ, ಸೋಮಣ್ಣ, ರಾಜಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

17 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago