Categories: ಕೋಲಾರ

ನಗರದ ಪಿ.ಸಿ ಬಡಾವಣೆಯ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಪಿ.ಸಿ ಬಡಾವಣೆಯ ಮಿನಿ ಹೋಟೆಲ್ ವೃತ್ತದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಆಟೋ ನಿಲ್ದಾಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಆಟೋಚಾಲಕರೇ ನಿತ್ಯ ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡಿಗರು ತಮ್ಮ ಸಾರ್ವಜನಿಕ ಸೇವೆಯ ಆಟೋದಲ್ಲಿ ಕನ್ನಡ ಸಾಹಿತ್ಯದ ಬರಹದ ಸಾಲುಗಳು, ಸಾಹಿತಿಗಳು, ಚಿತ್ರನಟರ ಭಾವಚಿತ್ರಗಳು ನೋಡುಗರನ್ನು ಸೆಳೆಯುವಂತೆ ಮಾಡಿರುತ್ತಾರೆ. ಆ ಮೂಲಕ ಸಾಮಾಜಿಕ ಪರಿವರ್ತಣೆಯಲ್ಲಿ ಹಾಗೂ ಜನರಲ್ಲಿ ಕನ್ನಡ ಪ್ರೇಮ ಹೆಚ್ಚಿಸುವ ಕೆಲಸವನ್ನು ಆಟೋ ಚಾಲಕರು ಸಮರ್ಥವಾಗಿ ಮಾಡುತ್ತಿದ್ದಾರೆ. ಅವರಲ್ಲಿನ ಕನ್ನಡತನವನ್ನು ನಾವು ಗುರುತಿಸಿ ಅಭಿನಂದಿಸಬೇಕು, ಕನ್ನಡ ಉಳಿವು ಮತ್ತು ಬೆಳೆವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ಕನ್ನಡ ರಾಜ್ಯೋತ್ಸವವು ನಿತ್ಯೋತ್ಸವವಾಗಬೇಕು. ಕನ್ನಡ ನಾಡನ್ನು ಆಳಿದ ಅನೇಕ ರಾಜರು ನಾಡಿಗಾಗಿ ಕೆಲಸ ಮಾಡಿದ್ದಾರೆ ನಾವು ಎಲ್ಲರೂ ಕನ್ನಡ ಭಾಷೆಗೆ ಧಕ್ಕೆಯಾಗದಂತೆ ಸಂಕಲ್ಪ ಮಾಡೋಣ ನಾಡಿಗೆ ಬರುವ ಅನ್ಯಭಾಷಿಕರಿಗೆ ಪ್ರೀತಿಯಿಂದ ಕನ್ನಡ ಕಲಿಸಬೇಕು ರಾಜ್ಯದಲ್ಲಿ ಲಕ್ಷಾಂತರ ಆಟೋ ಚಾಲಕರು ಸ್ವಾವಲಂಬನೆಯಿಂದ ದುಡಿಯುತ್ತಾ ಸಾರ್ವಜನಿಕರ ಸೇವಾಕ್ಷೇತ್ರದಲ್ಲಿ ಕನ್ನಡ ಪ್ರೇಮ ಮೆರೆದಿದ್ದಾರೆ ಎಂದರು.

ನಿಲ್ದಾಣದಲ್ಲಿನ ಚಾಲಕರು ತಮ್ಮ ಆಟೋಗಳನ್ನು ಹೂವು ಮತ್ತು ಕನ್ನಡದ ಬಾವುಟಗಳೊಂದಿಗೆ ಸಿಂಗರಿಸಿ ಮೆರವಣಿಗೆ ಮಾಡಿ ಕನ್ನಡ ಪ್ರೇಮ ಮೆರೆದರು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು ಸಂಘದ ಅಧ್ಯಕ್ಷ ಶ್ರೀನಿವಾಸ್, ಆಟೋ ಚಾಲಕರಾದ ಬಾಲಯ್ಯ, ಜಗದೀಶ್, ಶೇಖರ್, ನಾಗೇಶ್, ಪುನೀತ್, ಧರ್ಮ, ಸೋಮಣ್ಣ, ರಾಜಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

10 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

10 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

15 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago