Categories: ಕೋಲಾರ

ನಗರದ ಪಿ.ಸಿ ಬಡಾವಣೆಯ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಪಿ.ಸಿ ಬಡಾವಣೆಯ ಮಿನಿ ಹೋಟೆಲ್ ವೃತ್ತದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಆಟೋ ನಿಲ್ದಾಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಆಟೋಚಾಲಕರೇ ನಿತ್ಯ ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡಿಗರು ತಮ್ಮ ಸಾರ್ವಜನಿಕ ಸೇವೆಯ ಆಟೋದಲ್ಲಿ ಕನ್ನಡ ಸಾಹಿತ್ಯದ ಬರಹದ ಸಾಲುಗಳು, ಸಾಹಿತಿಗಳು, ಚಿತ್ರನಟರ ಭಾವಚಿತ್ರಗಳು ನೋಡುಗರನ್ನು ಸೆಳೆಯುವಂತೆ ಮಾಡಿರುತ್ತಾರೆ. ಆ ಮೂಲಕ ಸಾಮಾಜಿಕ ಪರಿವರ್ತಣೆಯಲ್ಲಿ ಹಾಗೂ ಜನರಲ್ಲಿ ಕನ್ನಡ ಪ್ರೇಮ ಹೆಚ್ಚಿಸುವ ಕೆಲಸವನ್ನು ಆಟೋ ಚಾಲಕರು ಸಮರ್ಥವಾಗಿ ಮಾಡುತ್ತಿದ್ದಾರೆ. ಅವರಲ್ಲಿನ ಕನ್ನಡತನವನ್ನು ನಾವು ಗುರುತಿಸಿ ಅಭಿನಂದಿಸಬೇಕು, ಕನ್ನಡ ಉಳಿವು ಮತ್ತು ಬೆಳೆವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ಕನ್ನಡ ರಾಜ್ಯೋತ್ಸವವು ನಿತ್ಯೋತ್ಸವವಾಗಬೇಕು. ಕನ್ನಡ ನಾಡನ್ನು ಆಳಿದ ಅನೇಕ ರಾಜರು ನಾಡಿಗಾಗಿ ಕೆಲಸ ಮಾಡಿದ್ದಾರೆ ನಾವು ಎಲ್ಲರೂ ಕನ್ನಡ ಭಾಷೆಗೆ ಧಕ್ಕೆಯಾಗದಂತೆ ಸಂಕಲ್ಪ ಮಾಡೋಣ ನಾಡಿಗೆ ಬರುವ ಅನ್ಯಭಾಷಿಕರಿಗೆ ಪ್ರೀತಿಯಿಂದ ಕನ್ನಡ ಕಲಿಸಬೇಕು ರಾಜ್ಯದಲ್ಲಿ ಲಕ್ಷಾಂತರ ಆಟೋ ಚಾಲಕರು ಸ್ವಾವಲಂಬನೆಯಿಂದ ದುಡಿಯುತ್ತಾ ಸಾರ್ವಜನಿಕರ ಸೇವಾಕ್ಷೇತ್ರದಲ್ಲಿ ಕನ್ನಡ ಪ್ರೇಮ ಮೆರೆದಿದ್ದಾರೆ ಎಂದರು.

ನಿಲ್ದಾಣದಲ್ಲಿನ ಚಾಲಕರು ತಮ್ಮ ಆಟೋಗಳನ್ನು ಹೂವು ಮತ್ತು ಕನ್ನಡದ ಬಾವುಟಗಳೊಂದಿಗೆ ಸಿಂಗರಿಸಿ ಮೆರವಣಿಗೆ ಮಾಡಿ ಕನ್ನಡ ಪ್ರೇಮ ಮೆರೆದರು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು ಸಂಘದ ಅಧ್ಯಕ್ಷ ಶ್ರೀನಿವಾಸ್, ಆಟೋ ಚಾಲಕರಾದ ಬಾಲಯ್ಯ, ಜಗದೀಶ್, ಶೇಖರ್, ನಾಗೇಶ್, ಪುನೀತ್, ಧರ್ಮ, ಸೋಮಣ್ಣ, ರಾಜಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago