ನಗರದ ಪ್ರಮುಖ ಸ್ಥಳಗಳಲ್ಲಿ ನಗರ ಠಾಣಾ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಫೂಟ್ ಪೆಟ್ರೋಲಿಂಗ್: ಅಪಘಾತ, ಅಪರಾಧ ತಡೆ ಕುರಿತು ಜನರಲ್ಲಿ ಜಾಗೃತಿ

 

 

ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸಿಬ್ಬಂದಿಯೊಂದಿಗೆ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಡಿಗೆಯಲ್ಲಿಯೇ ಸಂಚರಿಸಿ ಅಪರಾಧ ಹಾಗೂ ಅಪಘಾತ ತಡೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ನಗರದಲ್ಲಿ ಇತ್ತೀಚೆಗೆ ಬೈಕ್, ಸರ, ಕುರಿ-ಮೇಕೆ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದ್ದು, ಇಂತಹ ಕಳ್ಳತನ ಪ್ರಕರಣಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಪರಾಧ ಕೃತ್ಯ ತಡೆಯುವಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜನರಿಗೆ ತಿಳಿಸಿಕೊಡಲಾಯಿತು.

ಅದೇರೀತಿ ವಾಹನಗಳನ್ನು ಚಾಲನೆ ಮಾಡುವ ವೇಳೆ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಿ ವಾಹನ ದಟ್ಟಣೆ, ಅಪಘಾತ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕು ಎಂದು ಜನರಿಗೆ ತಿಳಿಸಿದರು.

ಈ ವೇಳೆ ಸಿಬ್ಬಂದಿ ಹುಸೇನ್, ರೂಪೇಶ್, ಪುಟ್ಟನರಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *