ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸಿಬ್ಬಂದಿಯೊಂದಿಗೆ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಡಿಗೆಯಲ್ಲಿಯೇ ಸಂಚರಿಸಿ ಅಪರಾಧ ಹಾಗೂ ಅಪಘಾತ ತಡೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ನಗರದಲ್ಲಿ ಇತ್ತೀಚೆಗೆ ಬೈಕ್, ಸರ, ಕುರಿ-ಮೇಕೆ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದ್ದು, ಇಂತಹ ಕಳ್ಳತನ ಪ್ರಕರಣಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಪರಾಧ ಕೃತ್ಯ ತಡೆಯುವಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜನರಿಗೆ ತಿಳಿಸಿಕೊಡಲಾಯಿತು.
ಈ ವೇಳೆ ಸಿಬ್ಬಂದಿ ಹುಸೇನ್, ರೂಪೇಶ್, ಪುಟ್ಟನರಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…