ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮಕ್ಕೆ ಜನ ಸೇರದಿದಕ್ಕೆ ಬಿಜೆಪಿಯ ಮುಖಂಡರು ಪಕ್ಷದ ಕಚೇರಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು, ಈ ವೇಳೆ ದಲಿತ ಸಮುದಾಯದ ನಗರಸಭಾ ಸದಸ್ಯ ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾಗ ಇದನ್ನು ವಿರೋಧಿಸಿದ ಕೆಲ ಬಿಜೆಪಿಯ ಮುಖಂಡರು ಜಾತಿ ನಿಂದನೆ ಮಾಡಿದಲ್ಲದೆ ಅವರ ಅಂಗಿ ಹರಿದು ಹಾಕಿದ್ದಲ್ಲದೆ, ಕಾಲಿನ ಒದ್ದು ಜೀವ ಬೆದರಿಕೆಯನ್ನ ಹಾಕಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಆರ್.ಶಿವಣ್ಣ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೊಡ್ಡಬಳ್ಳಾಪುರ ನಗರಸಭಾ ಸದಸ್ಯರಾದ ಆರ್.ಶಿವಣ್ಣ ಹಲ್ಲೆಗೊಳಗಾದವರು, ದೊಡ್ಡಬಳ್ಳಾಪುರ ನಗರದ ಬಸವೇಶ್ವರನಗರದಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ಬಿಜೆಪಿಯ ಮುಖಂಡರಾದ ಬಿ.ಜಿ.ಶ್ರೀನಿವಾಸ್, ಆನಂದ ಮೂರ್ತಿ, ಮಧು ಬೇಗಲಿ ಮತ್ತು ನಾಗೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ, ಹಲ್ಲೆ ನಡೆಸಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆ :
ಜನವರಿ 23 ರಂದು ತಾಲ್ಲೂಕಿನ ಮಧುರೆಗೆ ಕೇಂದ್ರದ ರಾಜ್ಯ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ್ದರು, ಆದರೆ ಈ ಬಗ್ಗೆ ನಗರದ ಮುಖಂಡರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರ ಸೇರಿರಲಿಲ್ಲ.
ಈ ವಿಚಾರವನ್ನು ತಾಲ್ಲೂಕು ಅಧ್ಯಕ್ಷ ಅಥವಾ ನಗರ ಅಧ್ಯಕ್ಷರಾದವರು ಮುಖಂಡರಿಗೆ ಮಾಹಿತಿ ನೀಡಬೇಕಾಗಿತ್ತು. ಆದರೆ, ಇದ್ಯಾವುದೂ ಆಗದೇ ಇರುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯವನ್ನು ಶಿವಣ್ಣ ಹೇಳಿದ್ದಾರೆ, ಶಿವಣ್ಣ ಮಾತಿನಿಂದ ಕೋಪಗೊಂಡ ಅವರು ಜಾತಿ ನಿಂದನೆ ಮಾಡಿದ್ದಾರೆ, ಸಭೆಗೆ ನಿನ್ನನ್ನು ಸೇರಿಸುವುದೇ ಹೆಚ್ಚು ಎಂದು ಬಿ.ಜಿ.ಶ್ರೀನಿವಾಸ್ , ಮಧು ಬೇಗಲಿ, ನಾಗೇಶ್ ಮತ್ತು ಆನಂದಮೂರ್ತಿ ಎಂಬಾತ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ, ಜಾತಿ ನಿಂದನೆ ಮಾಡಿ, ಅಂಗಿಯನ್ನು ಹರಿದುಹಾಕಿ, ಒಡೆದಿದ್ದಾರೆ ಎಂದು ಹಲ್ಲೆಗೊಳಗಾದ ಶಿವಣ್ಣ ಆರೋಪ ಮಾಡಿದ್ದಾರೆ.
ಈ ಕುರಿತು ಪಕ್ಷದ ತಾಲೂಕು ಹಾಗೂ ಜಿಲ್ಲಾ ಹಿರಿಯ ಮುಖಂಡರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರಿಗೆ ದೂರು ನೀಡಲಾಗಿದೆ ಎಂದು ಹಲ್ಲೆಗೊಳಗಾದ ಶಿವಣ್ಣ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…