ನಗರದ ಬಿಜೆಪಿ ಕಚೇರಿಯೊಳಗೆ ದಲಿತ ಜನಪ್ರತಿನಿಧಿ ಮೇಲೆ ಹಲ್ಲೆ; ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮಕ್ಕೆ ಜನ ಸೇರದಿದಕ್ಕೆ ಬಿಜೆಪಿಯ ಮುಖಂಡರು ಪಕ್ಷದ ಕಚೇರಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು, ಈ ವೇಳೆ ದಲಿತ ಸಮುದಾಯದ ನಗರಸಭಾ ಸದಸ್ಯ ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾಗ ಇದನ್ನು ವಿರೋಧಿಸಿದ ಕೆಲ ಬಿಜೆಪಿಯ ಮುಖಂಡರು ಜಾತಿ ನಿಂದನೆ ಮಾಡಿದಲ್ಲದೆ ಅವರ ಅಂಗಿ ಹರಿದು ಹಾಕಿದ್ದಲ್ಲದೆ, ಕಾಲಿನ ಒದ್ದು ಜೀವ ಬೆದರಿಕೆಯನ್ನ ಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಆರ್.ಶಿವಣ್ಣ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೊಡ್ಡಬಳ್ಳಾಪುರ ನಗರಸಭಾ ಸದಸ್ಯರಾದ ಆರ್.ಶಿವಣ್ಣ ಹಲ್ಲೆಗೊಳಗಾದವರು, ದೊಡ್ಡಬಳ್ಳಾಪುರ ನಗರದ ಬಸವೇಶ್ವರನಗರದಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ಬಿಜೆಪಿಯ ಮುಖಂಡರಾದ ಬಿ.ಜಿ.ಶ್ರೀನಿವಾಸ್, ಆನಂದ ಮೂರ್ತಿ, ಮಧು ಬೇಗಲಿ ಮತ್ತು ನಾಗೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ, ಹಲ್ಲೆ ನಡೆಸಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ :

ಜನವರಿ 23 ರಂದು ತಾಲ್ಲೂಕಿನ ಮಧುರೆಗೆ ಕೇಂದ್ರದ ರಾಜ್ಯ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ್ದರು, ಆದರೆ ಈ ಬಗ್ಗೆ ನಗರದ ಮುಖಂಡರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರ ಸೇರಿರಲಿಲ್ಲ.

ಈ ವಿಚಾರವನ್ನು ತಾಲ್ಲೂಕು ಅಧ್ಯಕ್ಷ ಅಥವಾ ನಗರ ಅಧ್ಯಕ್ಷರಾದವರು ಮುಖಂಡರಿಗೆ ಮಾಹಿತಿ ನೀಡಬೇಕಾಗಿತ್ತು. ಆದರೆ, ಇದ್ಯಾವುದೂ ಆಗದೇ ಇರುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯವನ್ನು ಶಿವಣ್ಣ ಹೇಳಿದ್ದಾರೆ, ಶಿವಣ್ಣ ಮಾತಿನಿಂದ ಕೋಪಗೊಂಡ ಅವರು ಜಾತಿ ನಿಂದನೆ ಮಾಡಿದ್ದಾರೆ, ಸಭೆಗೆ ನಿನ್ನನ್ನು ಸೇರಿಸುವುದೇ ಹೆಚ್ಚು ಎಂದು ಬಿ.ಜಿ.ಶ್ರೀನಿವಾಸ್ , ಮಧು ಬೇಗಲಿ, ನಾಗೇಶ್ ಮತ್ತು ಆನಂದಮೂರ್ತಿ ಎಂಬಾತ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ, ಜಾತಿ ನಿಂದನೆ ಮಾಡಿ, ಅಂಗಿಯನ್ನು ಹರಿದುಹಾಕಿ, ಒಡೆದಿದ್ದಾರೆ ಎಂದು ಹಲ್ಲೆಗೊಳಗಾದ ಶಿವಣ್ಣ ಆರೋಪ ಮಾಡಿದ್ದಾರೆ.

ಈ ಕುರಿತು ಪಕ್ಷದ ತಾಲೂಕು ಹಾಗೂ ಜಿಲ್ಲಾ ಹಿರಿಯ ಮುಖಂಡರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ‌‌.ಕೆ.ಸುಧಾಕರ್ ಅವರಿಗೆ ದೂರು ನೀಡಲಾಗಿದೆ ಎಂದು ಹಲ್ಲೆಗೊಳಗಾದ ಶಿವಣ್ಣ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago