ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಗುರುಕುಲ ಶಾಲೆಯ ವಾರ್ಷಿಕ‌ ಕ್ರೀಡಾಕೂಟ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ‌ ಜರುಗಿತು.

ಕ್ರೀಡಾಜ್ಯೋತಿ ಬೆಳಗುವ ಮೂಲಕ‌ ಅಂತರಾಷ್ಟ್ರೀಯ ಕ್ರೀಡಾಪಟು ಆನಂದಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ಶಾಲೆಯ 985 ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಗುರುಕುಲ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಎಲ್ಲ ಮಕ್ಕಳು ಆಟೋಟದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇದೇ‌ ಮೊದಲ ಬಾರಿಗೆ 660-680 ಪ್ರಶಸ್ತಿಗಳನ್ನು ನೀಡಲಾಗಿದೆ. ಮಕ್ಕಳ ಬೆಳವಣಿಗೆಯ ಹಿತದೃಷ್ಟಿಯಿಂದ ಕ್ರೀಡೆ ಅತ್ಯಂತ ಮಹತ್ವದ್ದಾಗಿದೆ. ಬಹುಪಾಲು ಮಕ್ಕಳಿಗೆ ಪ್ರಶಸ್ತಿ ನೀಡುವುದರಿಂದ ಅವರಲ್ಲಿ ಕ್ರೀಡಾಸಕ್ತಿ ಉದ್ದೀಪಿಸಬಹುದು‌ ಎಂಬ ದೃಷ್ಟಿಯಿಂದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ಮಕ್ಕಳಿಗೆ ಪಾಠದ ಜೊತೆಗೆ ಆಟವೂ ಮುಖ್ಯ. ಇವೆರಡು ಒಂದೇ ನಾಣ್ಯದ ಎರಡು‌ ಮುಖಗಳಿದ್ದಂತೆ. ಮಕ್ಕಳ ಏಳ್ಗೆಗಾಗಿ ಶಾಲೆಯ ಆಡಳಿತ ಮಂಡಳಿ ಯಾವ ತ್ಯಾಗಕ್ಕೂ ಸದಾ ಸಿದ್ಧವಿರಲಿದೆ ಎಂದು ಹೇಳಿದರು.

ಜಾವೆಲಿನ್ ಥ್ರೋ, ಹರ್ಡಲ್ಸ್, ಭರ್ಜಿ‌ಎಸೆತ, ಉದ್ದಜಿಗಿತದಲ್ಲಿ ನಗರದ ಗುರುಕುಲ‌ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ‌ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ತಿಂಗಳು‌ 21 ರಂದು ಹೊಸಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೊ, ಭರ್ಜಿ ಎಸೆತ, ಹರ್ಡಲ್ಸ್, ಉದ್ದ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ‌ಗಳಾದ ಕಿಶನ್ ಚಂದ್ರ, ರುಚಿತಾ, ಸಿಂಚನಾ ಹಾಗೂ ವರ್ಷಿತಾ ಅವರು ನೇರವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದಕ್ಕೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಈ ವೇಳೆ ಆಡಳಿತ‌ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್, ಜಂಟಿ‌ ಕಾರ್ಯದರ್ಶಿ ರಿತಿಕ್ ನರೇಂದ್ರ, ಉಪ ಪ್ರಾಂಶುಪಾಲ‌ ಶರಣ್ ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago