ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಗುರುಕುಲ ಶಾಲೆಯ ವಾರ್ಷಿಕ‌ ಕ್ರೀಡಾಕೂಟ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ‌ ಜರುಗಿತು.

ಕ್ರೀಡಾಜ್ಯೋತಿ ಬೆಳಗುವ ಮೂಲಕ‌ ಅಂತರಾಷ್ಟ್ರೀಯ ಕ್ರೀಡಾಪಟು ಆನಂದಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ಶಾಲೆಯ 985 ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಗುರುಕುಲ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಎಲ್ಲ ಮಕ್ಕಳು ಆಟೋಟದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇದೇ‌ ಮೊದಲ ಬಾರಿಗೆ 660-680 ಪ್ರಶಸ್ತಿಗಳನ್ನು ನೀಡಲಾಗಿದೆ. ಮಕ್ಕಳ ಬೆಳವಣಿಗೆಯ ಹಿತದೃಷ್ಟಿಯಿಂದ ಕ್ರೀಡೆ ಅತ್ಯಂತ ಮಹತ್ವದ್ದಾಗಿದೆ. ಬಹುಪಾಲು ಮಕ್ಕಳಿಗೆ ಪ್ರಶಸ್ತಿ ನೀಡುವುದರಿಂದ ಅವರಲ್ಲಿ ಕ್ರೀಡಾಸಕ್ತಿ ಉದ್ದೀಪಿಸಬಹುದು‌ ಎಂಬ ದೃಷ್ಟಿಯಿಂದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ಮಕ್ಕಳಿಗೆ ಪಾಠದ ಜೊತೆಗೆ ಆಟವೂ ಮುಖ್ಯ. ಇವೆರಡು ಒಂದೇ ನಾಣ್ಯದ ಎರಡು‌ ಮುಖಗಳಿದ್ದಂತೆ. ಮಕ್ಕಳ ಏಳ್ಗೆಗಾಗಿ ಶಾಲೆಯ ಆಡಳಿತ ಮಂಡಳಿ ಯಾವ ತ್ಯಾಗಕ್ಕೂ ಸದಾ ಸಿದ್ಧವಿರಲಿದೆ ಎಂದು ಹೇಳಿದರು.

ಜಾವೆಲಿನ್ ಥ್ರೋ, ಹರ್ಡಲ್ಸ್, ಭರ್ಜಿ‌ಎಸೆತ, ಉದ್ದಜಿಗಿತದಲ್ಲಿ ನಗರದ ಗುರುಕುಲ‌ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ‌ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ತಿಂಗಳು‌ 21 ರಂದು ಹೊಸಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೊ, ಭರ್ಜಿ ಎಸೆತ, ಹರ್ಡಲ್ಸ್, ಉದ್ದ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ‌ಗಳಾದ ಕಿಶನ್ ಚಂದ್ರ, ರುಚಿತಾ, ಸಿಂಚನಾ ಹಾಗೂ ವರ್ಷಿತಾ ಅವರು ನೇರವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದಕ್ಕೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಈ ವೇಳೆ ಆಡಳಿತ‌ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್, ಜಂಟಿ‌ ಕಾರ್ಯದರ್ಶಿ ರಿತಿಕ್ ನರೇಂದ್ರ, ಉಪ ಪ್ರಾಂಶುಪಾಲ‌ ಶರಣ್ ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago