ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಸಾಮಾಜಿಕ ಸೇವೆ ಮಾಡುವ ಮನಸ್ಸು ಎಲ್ಲರಿಗೂ ಬರುವುದಿಲ್ಲ. ನಿಷ್ಕಲ್ಮಷ ವ್ಯಕ್ತಿಗಳಿಂದ ಮಾತ್ರ ಸಾಮಾಜಿಕ ಕೆಲಸ ಸಾಧ್ಯ ಎಂದು ಪುಷ್ಪಾಂಡಜ ಮಠದ ದಿವ್ಯಜ್ಞಾನಾನಂದ ಶ್ರೀಗಳು ತಿಳಿಸಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಬಿಜೆಪಿ ಮುಖಂಡ ಸತ್ಯಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನರಲ್ಲಿ ಆಹಾರ ಪದ್ಧತಿ ಸಮತೋಲನ ವಿಲ್ಲದೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ. ಹೀಗಾಗಿ
ಯುವ ಜನತೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಆಹಾರ ಪದ್ಧತಿಯಲ್ಲಿಯೂ ಸಾಕಷ್ಟು ಏರುಪೇರುಗಳು ಆಗಿರುವುದರಿಂದ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಎಂದರು.

ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್ ಮಾತನಾಡಿ ಹಿಂದೆ ಸರಕಾರಗಳು ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡುತ್ತಿತ್ತು. ಈಗ ಖಾಸಗಿ ವ್ಯಕ್ತಿಗಳು ನೀಡುತ್ತಿವೆ. ಇದರಿಂದ ಶಿಕ್ಷಣ ಹಾಗೂ ಆರೋಗ್ಯದ ಮೌಲ್ಯ ಕುಸಿದಿದೆ. ದೇಹದ ಎಲ್ಲಾ ಭಾಗಗಳು ಚೆನ್ನಾಗಿದ್ದರೆ ಮಾತ್ರ ಆರೋಗ್ಯ ಚೆನ್ನಾಗಿದೆ ಎಂದು ಅರ್ಥ. ಬೆಂಗಳೂರು ಡಯಾಬಿಟಿಕ್ ಸೆಂಟರ್ ಆಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು ೪೦೦ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಮುಖಂಡ ಕೆ.ವಿ ಸತ್ಯಪ್ರಕಾಶ್ ಮಾತನಾಡಿ ಮುಂದಿನ ದಿನಗಳಲ್ಲಿ ನಗರ ಸೇರಿದಂತೆ ಪ್ರತಿ ಹೋಬಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯವಿದ್ದರೆ ಮಿಕ್ಕೆದ್ದೆಲ್ಲಾ ಸರಾಗವಾಗಿ ಆಗುತ್ತದೆ ಆರೋಗ್ಯವೇ ಇಲ್ಲದಿದ್ದರೆ ಜೀವನದಲ್ಲಿ ಏನನ್ನೂ ಬಯಸಲು ಸಾಧ್ಯವಾಗುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ತಳಗವಾರ ಲಕ್ಷ್ಮೀನಾರಾಯಣ್, ಪ್ರಕಾಶ್, ಅಶ್ವತ್ಥನಾರಾಯಣಗೌಡ, ಪುಟ್ಟಬಸವರಾಜು, ಗೋಪಿ, ಶರತ್, ಅಶೋಕ್, ಜನಪರ ಮಂಜುನಾಥ, ಪ್ರದೀಪ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

18 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago