ಸಾಮಾಜಿಕ ಸೇವೆ ಮಾಡುವ ಮನಸ್ಸು ಎಲ್ಲರಿಗೂ ಬರುವುದಿಲ್ಲ. ನಿಷ್ಕಲ್ಮಷ ವ್ಯಕ್ತಿಗಳಿಂದ ಮಾತ್ರ ಸಾಮಾಜಿಕ ಕೆಲಸ ಸಾಧ್ಯ ಎಂದು ಪುಷ್ಪಾಂಡಜ ಮಠದ ದಿವ್ಯಜ್ಞಾನಾನಂದ ಶ್ರೀಗಳು ತಿಳಿಸಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಬಿಜೆಪಿ ಮುಖಂಡ ಸತ್ಯಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನರಲ್ಲಿ ಆಹಾರ ಪದ್ಧತಿ ಸಮತೋಲನ ವಿಲ್ಲದೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ. ಹೀಗಾಗಿ
ಯುವ ಜನತೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಆಹಾರ ಪದ್ಧತಿಯಲ್ಲಿಯೂ ಸಾಕಷ್ಟು ಏರುಪೇರುಗಳು ಆಗಿರುವುದರಿಂದ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಎಂದರು.
ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್ ಮಾತನಾಡಿ ಹಿಂದೆ ಸರಕಾರಗಳು ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡುತ್ತಿತ್ತು. ಈಗ ಖಾಸಗಿ ವ್ಯಕ್ತಿಗಳು ನೀಡುತ್ತಿವೆ. ಇದರಿಂದ ಶಿಕ್ಷಣ ಹಾಗೂ ಆರೋಗ್ಯದ ಮೌಲ್ಯ ಕುಸಿದಿದೆ. ದೇಹದ ಎಲ್ಲಾ ಭಾಗಗಳು ಚೆನ್ನಾಗಿದ್ದರೆ ಮಾತ್ರ ಆರೋಗ್ಯ ಚೆನ್ನಾಗಿದೆ ಎಂದು ಅರ್ಥ. ಬೆಂಗಳೂರು ಡಯಾಬಿಟಿಕ್ ಸೆಂಟರ್ ಆಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು ೪೦೦ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಬಿಜೆಪಿ ಮುಖಂಡ ಕೆ.ವಿ ಸತ್ಯಪ್ರಕಾಶ್ ಮಾತನಾಡಿ ಮುಂದಿನ ದಿನಗಳಲ್ಲಿ ನಗರ ಸೇರಿದಂತೆ ಪ್ರತಿ ಹೋಬಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯವಿದ್ದರೆ ಮಿಕ್ಕೆದ್ದೆಲ್ಲಾ ಸರಾಗವಾಗಿ ಆಗುತ್ತದೆ ಆರೋಗ್ಯವೇ ಇಲ್ಲದಿದ್ದರೆ ಜೀವನದಲ್ಲಿ ಏನನ್ನೂ ಬಯಸಲು ಸಾಧ್ಯವಾಗುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ತಳಗವಾರ ಲಕ್ಷ್ಮೀನಾರಾಯಣ್, ಪ್ರಕಾಶ್, ಅಶ್ವತ್ಥನಾರಾಯಣಗೌಡ, ಪುಟ್ಟಬಸವರಾಜು, ಗೋಪಿ, ಶರತ್, ಅಶೋಕ್, ಜನಪರ ಮಂಜುನಾಥ, ಪ್ರದೀಪ್ ಮತ್ತಿತರರು ಇದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…