ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಸಾಮಾಜಿಕ ಸೇವೆ ಮಾಡುವ ಮನಸ್ಸು ಎಲ್ಲರಿಗೂ ಬರುವುದಿಲ್ಲ. ನಿಷ್ಕಲ್ಮಷ ವ್ಯಕ್ತಿಗಳಿಂದ ಮಾತ್ರ ಸಾಮಾಜಿಕ ಕೆಲಸ ಸಾಧ್ಯ ಎಂದು ಪುಷ್ಪಾಂಡಜ ಮಠದ ದಿವ್ಯಜ್ಞಾನಾನಂದ ಶ್ರೀಗಳು ತಿಳಿಸಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಬಿಜೆಪಿ ಮುಖಂಡ ಸತ್ಯಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನರಲ್ಲಿ ಆಹಾರ ಪದ್ಧತಿ ಸಮತೋಲನ ವಿಲ್ಲದೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ. ಹೀಗಾಗಿ
ಯುವ ಜನತೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಆಹಾರ ಪದ್ಧತಿಯಲ್ಲಿಯೂ ಸಾಕಷ್ಟು ಏರುಪೇರುಗಳು ಆಗಿರುವುದರಿಂದ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಎಂದರು.

ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್ ಮಾತನಾಡಿ ಹಿಂದೆ ಸರಕಾರಗಳು ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡುತ್ತಿತ್ತು. ಈಗ ಖಾಸಗಿ ವ್ಯಕ್ತಿಗಳು ನೀಡುತ್ತಿವೆ. ಇದರಿಂದ ಶಿಕ್ಷಣ ಹಾಗೂ ಆರೋಗ್ಯದ ಮೌಲ್ಯ ಕುಸಿದಿದೆ. ದೇಹದ ಎಲ್ಲಾ ಭಾಗಗಳು ಚೆನ್ನಾಗಿದ್ದರೆ ಮಾತ್ರ ಆರೋಗ್ಯ ಚೆನ್ನಾಗಿದೆ ಎಂದು ಅರ್ಥ. ಬೆಂಗಳೂರು ಡಯಾಬಿಟಿಕ್ ಸೆಂಟರ್ ಆಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು ೪೦೦ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಮುಖಂಡ ಕೆ.ವಿ ಸತ್ಯಪ್ರಕಾಶ್ ಮಾತನಾಡಿ ಮುಂದಿನ ದಿನಗಳಲ್ಲಿ ನಗರ ಸೇರಿದಂತೆ ಪ್ರತಿ ಹೋಬಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯವಿದ್ದರೆ ಮಿಕ್ಕೆದ್ದೆಲ್ಲಾ ಸರಾಗವಾಗಿ ಆಗುತ್ತದೆ ಆರೋಗ್ಯವೇ ಇಲ್ಲದಿದ್ದರೆ ಜೀವನದಲ್ಲಿ ಏನನ್ನೂ ಬಯಸಲು ಸಾಧ್ಯವಾಗುವುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ತಳಗವಾರ ಲಕ್ಷ್ಮೀನಾರಾಯಣ್, ಪ್ರಕಾಶ್, ಅಶ್ವತ್ಥನಾರಾಯಣಗೌಡ, ಪುಟ್ಟಬಸವರಾಜು, ಗೋಪಿ, ಶರತ್, ಅಶೋಕ್, ಜನಪರ ಮಂಜುನಾಥ, ಪ್ರದೀಪ್ ಮತ್ತಿತರರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago