ಸಾಮಾಜಿಕ ಸೇವೆ ಮಾಡುವ ಮನಸ್ಸು ಎಲ್ಲರಿಗೂ ಬರುವುದಿಲ್ಲ. ನಿಷ್ಕಲ್ಮಷ ವ್ಯಕ್ತಿಗಳಿಂದ ಮಾತ್ರ ಸಾಮಾಜಿಕ ಕೆಲಸ ಸಾಧ್ಯ ಎಂದು ಪುಷ್ಪಾಂಡಜ ಮಠದ ದಿವ್ಯಜ್ಞಾನಾನಂದ ಶ್ರೀಗಳು ತಿಳಿಸಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಬಿಜೆಪಿ ಮುಖಂಡ ಸತ್ಯಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಜನರಲ್ಲಿ ಆಹಾರ ಪದ್ಧತಿ ಸಮತೋಲನ ವಿಲ್ಲದೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ. ಹೀಗಾಗಿ
ಯುವ ಜನತೆ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಇಂದಿನ ಆಹಾರ ಪದ್ಧತಿಯಲ್ಲಿಯೂ ಸಾಕಷ್ಟು ಏರುಪೇರುಗಳು ಆಗಿರುವುದರಿಂದ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಎಂದರು.
ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್ ಮಾತನಾಡಿ ಹಿಂದೆ ಸರಕಾರಗಳು ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡುತ್ತಿತ್ತು. ಈಗ ಖಾಸಗಿ ವ್ಯಕ್ತಿಗಳು ನೀಡುತ್ತಿವೆ. ಇದರಿಂದ ಶಿಕ್ಷಣ ಹಾಗೂ ಆರೋಗ್ಯದ ಮೌಲ್ಯ ಕುಸಿದಿದೆ. ದೇಹದ ಎಲ್ಲಾ ಭಾಗಗಳು ಚೆನ್ನಾಗಿದ್ದರೆ ಮಾತ್ರ ಆರೋಗ್ಯ ಚೆನ್ನಾಗಿದೆ ಎಂದು ಅರ್ಥ. ಬೆಂಗಳೂರು ಡಯಾಬಿಟಿಕ್ ಸೆಂಟರ್ ಆಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಸುಮಾರು ೪೦೦ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಬಿಜೆಪಿ ಮುಖಂಡ ಕೆ.ವಿ ಸತ್ಯಪ್ರಕಾಶ್ ಮಾತನಾಡಿ ಮುಂದಿನ ದಿನಗಳಲ್ಲಿ ನಗರ ಸೇರಿದಂತೆ ಪ್ರತಿ ಹೋಬಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯವಿದ್ದರೆ ಮಿಕ್ಕೆದ್ದೆಲ್ಲಾ ಸರಾಗವಾಗಿ ಆಗುತ್ತದೆ ಆರೋಗ್ಯವೇ ಇಲ್ಲದಿದ್ದರೆ ಜೀವನದಲ್ಲಿ ಏನನ್ನೂ ಬಯಸಲು ಸಾಧ್ಯವಾಗುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ತಳಗವಾರ ಲಕ್ಷ್ಮೀನಾರಾಯಣ್, ಪ್ರಕಾಶ್, ಅಶ್ವತ್ಥನಾರಾಯಣಗೌಡ, ಪುಟ್ಟಬಸವರಾಜು, ಗೋಪಿ, ಶರತ್, ಅಶೋಕ್, ಜನಪರ ಮಂಜುನಾಥ, ಪ್ರದೀಪ್ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…