ಡಿ.24ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗಿ ಬರುವುದಾಗಿ ಹೇಳಿ ನಗರದ ಮುತ್ತೂರುಕೆರೆಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ.
80 ವರ್ಷದ ವೃದ್ಧೆ ಜುಲೇಖಾಬಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ, ಮೃತ ವೃದ್ಧೆ ಮುತ್ತೂರು ಗ್ರಾಮದ ನಿವಾಸಿಯಾಗಿದ್ದು, ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ದರ್ಗಾಕ್ಕೆ ಹೋಗುವುದಾಗಿ ಹೇಳಿ ಹೊರಗೆ ಬಂದಿದ್ದರು, ಅನಂತರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.24ರಂದು ಮೃತ ಕುಟುಂಬಸ್ಥರು ಎಷ್ಟು ಹುಡುಕಿದರೂ ಪತ್ತೆಯಾಗದ ವೃದ್ಧೆ ಡಿ.26ರಂದು ಮುತ್ತೂರು ಗ್ರಾಮದ ನಿವಾಸಿಗೆ ಕೆರೆಯಲ್ಲಿ ತೆಲುತ್ತಿರುವ ಶವ ಕಾಣಿಸಿದೆ. ನಂತರ ಈ ಕುರಿತು ಕೂಡಲೇ ಮೃತಳ ಕುಟುಬಂಸ್ಥರಿಗೆ ಮಾಹಿತಿ ನೀಡಲಾಗಿದೆ.
ಕುಡಿತದ ಚಟ ಇದ್ದ ಮಹಿಳೆ ಕುಡಿದ ನಶೆಯಲ್ಲಿ ಕೆರೆಯ ದಂಡೆಯ ಮೇಲೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…