ನಗರದ ರಸ್ತೆಗಳ ಅಗಲೀಕರಣಕ್ಕೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಹಣ ಬಿಡುಗಡೆ ಮಾಡಬೇಕು- ಶಾಸಕ ಧೀರಜ್ ಮುನಿರಾಜ್ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕು ಬಸವ ಭವನದಿಂದ ಕೆಸಿಪಿ ಸರ್ಕಲ್‌ವರೆಗೂ ರಾಷ್ಟ್ರೀಯ ಹೆದ್ದಾರಿ-4ನೇ ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-7ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ -74 ರ ರಸ್ತೆಯ ಸರಪಳಿ 27.90 ರಿಂದ 31.40 ಕಿಮೀ ವರೆಗೆ 10 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ /ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಬಂದರೆ ನಗರದ ತಾಲೂಕು ಕಚೇರಿ ಮುಂದೆ‌ ಹಾದು ಹೋಗುವ ರಸ್ತೆಯಲ್ಲಿ ಮೊಣಕಾಲುದ್ದ ಮಳೆ ನೀರು ನಿಂತು ವಾಹನ ಸವಾರರು‌ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕನ್ನಡ ಜಾಗೃತ ಪರಿಷತ್ ಭವನ ಸರ್ಕಲ್ ನಲ್ಲಿ ರಸ್ತೆ ಮಧ್ಯೆ ಮ್ಯಾನ್ ಹೋಲ್ ಸಮಸ್ಯೆ ಇದೆ. ಈ ರಸ್ತೆಯಲ್ಲಿ ಎಷ್ಟೇ ಬಾರಿ ಡಾಂಬಾರು ಹಾಕಿದರೂ ಸಮಸ್ಯೆ ಹಾಗೇ ಇರುತ್ತದೆ ಎಂದು ಪರಿಗಣಿಸಿ ಶಾಶ್ವತ ಪರಿಹಾರಕ್ಕಾಗಿ ಬಸವ ಭವನ ವೃತ್ತದಿಂದ ಟೋಲ್ ಗೇಟ್ ವೃತ್ತದವರೆಗೆ ಬಿಬಿಎಂಪಿ ಮಾದರಿಯ ವೈಟ್ ಟಾಪಿಂಗ್(ಕಾಂಕ್ರೀಟ್ ರಸ್ತೆ) ನಿರ್ಮಾಣ ಮಾಡಲು‌ ನಿರ್ಧರಿಸಿ‌ ಇಂದು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ನ್ಯಾಷನಲ್ ಪ್ರೈಡ್ ಶಾಲೆಯಿಂದ ಆಲಹಳ್ಳಿ ಅಂಡರ್ ಪಾಸ್ ವರೆಗೂ ಡಬಲ್ ರೋಡ್ ಆಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿ ಇರುವ ಆಗಮನ ಮತ್ತು‌ ನಿರ್ಗಮನ‌ ಸ್ಥಳಗಳಿಂದ ಡಬಲ್ ರೋಡ್ ಗಳು ಆಗುತ್ತವೆ ಎಂದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧೀಕಾರ ಪ್ರತೀ ಸೈಟ್, ಲೇಔಟ್, ಪ್ಲಾನ್ ಅಪ್ರುವಲ್ ಗೆ ಹಣ ತೆಗೆದುಕೊಳ್ಳುತ್ತಾರೆ. ಡಿಪಿಯಯಲ್ಲಿ ಸುಮಾರು 14-16ಕೋಟಿ ಅನುದಾನವಿದೆ. ಅದನ್ನು ರಸ್ತೆ ಅಗಲೀಕರಣ ಸೇರಿದಂತೆ ದೊಡ್ಡಬಳ್ಳಾಪುರ ಅಭಿವೃದ್ಧೆಗೆ ಆ ಹಣವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ದೇವನಹಳ್ಳಿ, ಹೊಸಕೋಟೆ, ನೆಲಮಂಗಲದ ಕಮರ್ಷಿಯಲ್ ಸ್ಥಳಗಳಲ್ಲಿ ರಸ್ತೆಗಳು ಅಗಲೀಕರಣಗೊಂಡಿವೆ. ಆದರೆ ನಮ್ಮ ದೊಡ್ಡಬಳ್ಳಾಪುರದಲ್ಲಿ ರಸ್ತೆ ಅಗಲೀಕರಣವಾಗದೇ ಜನರಿಗೆ ಕಿರಿಕಿರಿ‌ ಉಂಟಾಗುತ್ತಿದೆ. ಕಿರಿದಾದ ರಸ್ತೆಗಳು ಅಗಲೀಕರಣವಾಗದ ಹೊರೆತು ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಲು ಅಸಾಧ್ಯ ಎಂದರು.

ಡಿಪಿಎ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳೇ ನೀವು ನಗರಕ್ಕೆ ಏನಾದರೂ ಕೊಡುಗೆ ಕೊಡಬೇಕೆಂದುಕೊಂಡಿದ್ದರೆ ದಯಮಾಡಿ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದು ಹೇಳಿದರು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಮ್ ಮಲ್ಲೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಎಸ್ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

5 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

6 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

18 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

18 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

18 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

18 hours ago