ನಗರದ ರಸ್ತೆಗಳ ಅಗಲೀಕರಣಕ್ಕೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಹಣ ಬಿಡುಗಡೆ ಮಾಡಬೇಕು- ಶಾಸಕ ಧೀರಜ್ ಮುನಿರಾಜ್ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕು ಬಸವ ಭವನದಿಂದ ಕೆಸಿಪಿ ಸರ್ಕಲ್‌ವರೆಗೂ ರಾಷ್ಟ್ರೀಯ ಹೆದ್ದಾರಿ-4ನೇ ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-7ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ -74 ರ ರಸ್ತೆಯ ಸರಪಳಿ 27.90 ರಿಂದ 31.40 ಕಿಮೀ ವರೆಗೆ 10 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ /ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಬಂದರೆ ನಗರದ ತಾಲೂಕು ಕಚೇರಿ ಮುಂದೆ‌ ಹಾದು ಹೋಗುವ ರಸ್ತೆಯಲ್ಲಿ ಮೊಣಕಾಲುದ್ದ ಮಳೆ ನೀರು ನಿಂತು ವಾಹನ ಸವಾರರು‌ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕನ್ನಡ ಜಾಗೃತ ಪರಿಷತ್ ಭವನ ಸರ್ಕಲ್ ನಲ್ಲಿ ರಸ್ತೆ ಮಧ್ಯೆ ಮ್ಯಾನ್ ಹೋಲ್ ಸಮಸ್ಯೆ ಇದೆ. ಈ ರಸ್ತೆಯಲ್ಲಿ ಎಷ್ಟೇ ಬಾರಿ ಡಾಂಬಾರು ಹಾಕಿದರೂ ಸಮಸ್ಯೆ ಹಾಗೇ ಇರುತ್ತದೆ ಎಂದು ಪರಿಗಣಿಸಿ ಶಾಶ್ವತ ಪರಿಹಾರಕ್ಕಾಗಿ ಬಸವ ಭವನ ವೃತ್ತದಿಂದ ಟೋಲ್ ಗೇಟ್ ವೃತ್ತದವರೆಗೆ ಬಿಬಿಎಂಪಿ ಮಾದರಿಯ ವೈಟ್ ಟಾಪಿಂಗ್(ಕಾಂಕ್ರೀಟ್ ರಸ್ತೆ) ನಿರ್ಮಾಣ ಮಾಡಲು‌ ನಿರ್ಧರಿಸಿ‌ ಇಂದು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ನ್ಯಾಷನಲ್ ಪ್ರೈಡ್ ಶಾಲೆಯಿಂದ ಆಲಹಳ್ಳಿ ಅಂಡರ್ ಪಾಸ್ ವರೆಗೂ ಡಬಲ್ ರೋಡ್ ಆಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿ ಇರುವ ಆಗಮನ ಮತ್ತು‌ ನಿರ್ಗಮನ‌ ಸ್ಥಳಗಳಿಂದ ಡಬಲ್ ರೋಡ್ ಗಳು ಆಗುತ್ತವೆ ಎಂದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧೀಕಾರ ಪ್ರತೀ ಸೈಟ್, ಲೇಔಟ್, ಪ್ಲಾನ್ ಅಪ್ರುವಲ್ ಗೆ ಹಣ ತೆಗೆದುಕೊಳ್ಳುತ್ತಾರೆ. ಡಿಪಿಯಯಲ್ಲಿ ಸುಮಾರು 14-16ಕೋಟಿ ಅನುದಾನವಿದೆ. ಅದನ್ನು ರಸ್ತೆ ಅಗಲೀಕರಣ ಸೇರಿದಂತೆ ದೊಡ್ಡಬಳ್ಳಾಪುರ ಅಭಿವೃದ್ಧೆಗೆ ಆ ಹಣವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ದೇವನಹಳ್ಳಿ, ಹೊಸಕೋಟೆ, ನೆಲಮಂಗಲದ ಕಮರ್ಷಿಯಲ್ ಸ್ಥಳಗಳಲ್ಲಿ ರಸ್ತೆಗಳು ಅಗಲೀಕರಣಗೊಂಡಿವೆ. ಆದರೆ ನಮ್ಮ ದೊಡ್ಡಬಳ್ಳಾಪುರದಲ್ಲಿ ರಸ್ತೆ ಅಗಲೀಕರಣವಾಗದೇ ಜನರಿಗೆ ಕಿರಿಕಿರಿ‌ ಉಂಟಾಗುತ್ತಿದೆ. ಕಿರಿದಾದ ರಸ್ತೆಗಳು ಅಗಲೀಕರಣವಾಗದ ಹೊರೆತು ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಲು ಅಸಾಧ್ಯ ಎಂದರು.

ಡಿಪಿಎ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳೇ ನೀವು ನಗರಕ್ಕೆ ಏನಾದರೂ ಕೊಡುಗೆ ಕೊಡಬೇಕೆಂದುಕೊಂಡಿದ್ದರೆ ದಯಮಾಡಿ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದು ಹೇಳಿದರು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಮ್ ಮಲ್ಲೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಎಸ್ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago