ನಗರದ ರಸ್ತೆಗಳ ಅಗಲೀಕರಣಕ್ಕೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಹಣ ಬಿಡುಗಡೆ ಮಾಡಬೇಕು- ಶಾಸಕ ಧೀರಜ್ ಮುನಿರಾಜ್ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕು ಬಸವ ಭವನದಿಂದ ಕೆಸಿಪಿ ಸರ್ಕಲ್‌ವರೆಗೂ ರಾಷ್ಟ್ರೀಯ ಹೆದ್ದಾರಿ-4ನೇ ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-7ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ -74 ರ ರಸ್ತೆಯ ಸರಪಳಿ 27.90 ರಿಂದ 31.40 ಕಿಮೀ ವರೆಗೆ 10 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ /ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ನಗರದ ತಾಲೂಕು ಕಚೇರಿ ವೃತ್ತದಲ್ಲಿಂದು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಬಂದರೆ ನಗರದ ತಾಲೂಕು ಕಚೇರಿ ಮುಂದೆ‌ ಹಾದು ಹೋಗುವ ರಸ್ತೆಯಲ್ಲಿ ಮೊಣಕಾಲುದ್ದ ಮಳೆ ನೀರು ನಿಂತು ವಾಹನ ಸವಾರರು‌ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕನ್ನಡ ಜಾಗೃತ ಪರಿಷತ್ ಭವನ ಸರ್ಕಲ್ ನಲ್ಲಿ ರಸ್ತೆ ಮಧ್ಯೆ ಮ್ಯಾನ್ ಹೋಲ್ ಸಮಸ್ಯೆ ಇದೆ. ಈ ರಸ್ತೆಯಲ್ಲಿ ಎಷ್ಟೇ ಬಾರಿ ಡಾಂಬಾರು ಹಾಕಿದರೂ ಸಮಸ್ಯೆ ಹಾಗೇ ಇರುತ್ತದೆ ಎಂದು ಪರಿಗಣಿಸಿ ಶಾಶ್ವತ ಪರಿಹಾರಕ್ಕಾಗಿ ಬಸವ ಭವನ ವೃತ್ತದಿಂದ ಟೋಲ್ ಗೇಟ್ ವೃತ್ತದವರೆಗೆ ಬಿಬಿಎಂಪಿ ಮಾದರಿಯ ವೈಟ್ ಟಾಪಿಂಗ್(ಕಾಂಕ್ರೀಟ್ ರಸ್ತೆ) ನಿರ್ಮಾಣ ಮಾಡಲು‌ ನಿರ್ಧರಿಸಿ‌ ಇಂದು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ನ್ಯಾಷನಲ್ ಪ್ರೈಡ್ ಶಾಲೆಯಿಂದ ಆಲಹಳ್ಳಿ ಅಂಡರ್ ಪಾಸ್ ವರೆಗೂ ಡಬಲ್ ರೋಡ್ ಆಗುತ್ತದೆ. ನಗರದ ನಾಲ್ಕು ದಿಕ್ಕುಗಳಲ್ಲಿ ಇರುವ ಆಗಮನ ಮತ್ತು‌ ನಿರ್ಗಮನ‌ ಸ್ಥಳಗಳಿಂದ ಡಬಲ್ ರೋಡ್ ಗಳು ಆಗುತ್ತವೆ ಎಂದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧೀಕಾರ ಪ್ರತೀ ಸೈಟ್, ಲೇಔಟ್, ಪ್ಲಾನ್ ಅಪ್ರುವಲ್ ಗೆ ಹಣ ತೆಗೆದುಕೊಳ್ಳುತ್ತಾರೆ. ಡಿಪಿಯಯಲ್ಲಿ ಸುಮಾರು 14-16ಕೋಟಿ ಅನುದಾನವಿದೆ. ಅದನ್ನು ರಸ್ತೆ ಅಗಲೀಕರಣ ಸೇರಿದಂತೆ ದೊಡ್ಡಬಳ್ಳಾಪುರ ಅಭಿವೃದ್ಧೆಗೆ ಆ ಹಣವನ್ನು ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ದೇವನಹಳ್ಳಿ, ಹೊಸಕೋಟೆ, ನೆಲಮಂಗಲದ ಕಮರ್ಷಿಯಲ್ ಸ್ಥಳಗಳಲ್ಲಿ ರಸ್ತೆಗಳು ಅಗಲೀಕರಣಗೊಂಡಿವೆ. ಆದರೆ ನಮ್ಮ ದೊಡ್ಡಬಳ್ಳಾಪುರದಲ್ಲಿ ರಸ್ತೆ ಅಗಲೀಕರಣವಾಗದೇ ಜನರಿಗೆ ಕಿರಿಕಿರಿ‌ ಉಂಟಾಗುತ್ತಿದೆ. ಕಿರಿದಾದ ರಸ್ತೆಗಳು ಅಗಲೀಕರಣವಾಗದ ಹೊರೆತು ದೊಡ್ಡಬಳ್ಳಾಪುರ ಅಭಿವೃದ್ಧಿಯಾಗಲು ಅಸಾಧ್ಯ ಎಂದರು.

ಡಿಪಿಎ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿಗಳೇ ನೀವು ನಗರಕ್ಕೆ ಏನಾದರೂ ಕೊಡುಗೆ ಕೊಡಬೇಕೆಂದುಕೊಂಡಿದ್ದರೆ ದಯಮಾಡಿ ರಸ್ತೆ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದು ಹೇಳಿದರು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಎಮ್ ಮಲ್ಲೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಎಸ್ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

6 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

7 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

18 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

19 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

19 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago