ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.

ಬಳಿಕ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು. ನಗರ ಮಾತ್ರವಲ್ಲದೇ ಸುತ್ತಲಿನ ಹತ್ತಾರು ಗ್ರಾಮಗಳ ಸದ್ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಪ್ರಧಾನ ಅರ್ಚಕ ಶಿವಶ್ರೀ ವಿಶ್ವಾಸ್ ದೀಕ್ಷಿತರ ನೇತೃತ್ವದಲ್ಲಿ ಯಾಗ ನೆರವೇರಿಸಲಾಯಿತು. ಈ ವೇಳೆ ದೇಗುಲದ ರಾಜಗೋಪುರ ದಾನಿಗಳಾದ ಲೇ.ಸಂಜಿವಮ್ಮ, ಹನುಮಂತೇಗೌಡ ಹಾಗೂ ಪದ್ಮಾವತಮ್ಮ, ಮಹಾದೇವ ಅವರ ಕುಟುಂಬಸ್ಥರು, ಸಹಸ್ರಾರು ಭಕ್ತರು ಪೂಜೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago