ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…