ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…