ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.

ಬಳಿಕ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು. ನಗರ ಮಾತ್ರವಲ್ಲದೇ ಸುತ್ತಲಿನ ಹತ್ತಾರು ಗ್ರಾಮಗಳ ಸದ್ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಪ್ರಧಾನ ಅರ್ಚಕ ಶಿವಶ್ರೀ ವಿಶ್ವಾಸ್ ದೀಕ್ಷಿತರ ನೇತೃತ್ವದಲ್ಲಿ ಯಾಗ ನೆರವೇರಿಸಲಾಯಿತು. ಈ ವೇಳೆ ದೇಗುಲದ ರಾಜಗೋಪುರ ದಾನಿಗಳಾದ ಲೇ.ಸಂಜಿವಮ್ಮ, ಹನುಮಂತೇಗೌಡ ಹಾಗೂ ಪದ್ಮಾವತಮ್ಮ, ಮಹಾದೇವ ಅವರ ಕುಟುಂಬಸ್ಥರು, ಸಹಸ್ರಾರು ಭಕ್ತರು ಪೂಜೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

47 minutes ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

6 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

17 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

17 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

21 hours ago