ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.

ಬಳಿಕ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು. ನಗರ ಮಾತ್ರವಲ್ಲದೇ ಸುತ್ತಲಿನ ಹತ್ತಾರು ಗ್ರಾಮಗಳ ಸದ್ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಪ್ರಧಾನ ಅರ್ಚಕ ಶಿವಶ್ರೀ ವಿಶ್ವಾಸ್ ದೀಕ್ಷಿತರ ನೇತೃತ್ವದಲ್ಲಿ ಯಾಗ ನೆರವೇರಿಸಲಾಯಿತು. ಈ ವೇಳೆ ದೇಗುಲದ ರಾಜಗೋಪುರ ದಾನಿಗಳಾದ ಲೇ.ಸಂಜಿವಮ್ಮ, ಹನುಮಂತೇಗೌಡ ಹಾಗೂ ಪದ್ಮಾವತಮ್ಮ, ಮಹಾದೇವ ಅವರ ಕುಟುಂಬಸ್ಥರು, ಸಹಸ್ರಾರು ಭಕ್ತರು ಪೂಜೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago