ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…